
ನಮಸ್ಕಾರ ಸ್ನೇಹಿತರೆ…
ಕೃಷಿ ಭಾಗ್ಯ ಯೋಜನೆಗೆ ನೀವು ಅರ್ಜಿ ಸಲ್ಲಿಸಬೇಕೆ.? ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಲು ಅರ್ಹರು ಇದರೆ ..? Krishi Bhagya Scheme 2024 ಗೆ ಅರ್ಜಿ ಸಲ್ಲಿಸಿರುವ ರೈತರಿಗೆ ಎಷ್ಷು ಸಹಾಯಧನ ದೊರೆಯಲಿದೆ..? ಹಾಗೂ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗೆ ಕೊಟ್ಟಿದ್ದೇವೆ ಸಂಪೂರ್ಣವಾಗಿ ನೋಡಿ.
ಮಳೆಯ ಆಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿಯೇ , ಸಮರ್ಪಕವಾಗಿ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸಲು, ಮತ್ತು ರೈತರ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಾಗೂ ಮಳೆ ನೀರು ವ್ಯರ್ಥವಾಗದಂತೆ ಆಯ್ದ ಸ್ಥಳಗಳಲ್ಲಿ ಕೃಷಿ ಹೊಂಡ ತೆಗೆದು ನೀರನ್ನು ಸಂಗ್ರಹಿಸಲಾಗುತ್ತದೆ.
•ಕೃಷಿ ಭಾಗ್ಯ ಯೋಜನೆಯಲ್ಲಿ ಈ ಕೆಳಗಿನ ಸೌಲಭ್ಯಗಳು ದೊರೆಯಲಿವೆ.
1)ಕ್ಷೇತ್ರ ಬದು ನಿರ್ಮಾಣ ಮಾಡುತ್ತಾರೆ.
2)ಕೃಷಿ ಹೊಂಡ ನಿರ್ಮಾಣ.
3)ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ.
- 4)ಕೃಷಿ ಹೊಂಡದ ಸುತ್ತಲೂ ತಂತಿಬೇಲಿ.
5)ಹೊಂಡದಿಂದ ನೀರು ಎತ್ತಲು ಡೀಸೆಲ್/ ಪೆಟ್ರೋಲ್/ ಸೋಲಾರ್ ಪಂಪ್ಸೆಟ್ ಸೌಲಭ್ಯ.
6)ಸೂಕ್ಷ್ಮ (ತುಂತುರು/ ಹನಿ) ನೀರಾವರಿ ಘಟಕ.
ಈ ಮೇಲಿನ ಎಲ್ಲ ಘಟಕಗಳ ಅನುಷ್ಠಾನಕ್ಕೆ ಸಾಮಾನ್ಯ ವರ್ಗದ ರೈತರಿಗೆ ಶೇಕಡಾ 80% ರಷ್ಟು ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇಕಡಾ.90% ರಷ್ಟು ಸಹಾಯಧನ ನೀಡುತ್ತಾರೆ . ನೀವು ಕೂಡ ಅರ್ಜಿ ಸಲ್ಲಿಸಿ ಈ ಸೌಲಭ್ಯಗಳ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
•ಅಗತ್ಯವಾದ ದಾಖಲೆಗಳು
1) ಪಾಸ್ ಪೋರ್ಟ್ ಅಳತೆಯ ಫೋಟೋ
2) ಪಹಣಿ
3) ಜಾತಿ ಪ್ರಮಾಣ ಪತ್ರ
4) ಬ್ಯಾಂಕ್ ಪಾಸ್ ಬುಕ್
Krishi Bhagya Scheme ಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ರೈತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿವಿರುವ ರೈತ ಸಂಪರ್ಕ ಕೇಂದ್ರ ವನ್ನು ಸಂಪರ್ಕಿಸುವಂತೆ ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆಯನು ತಿಳಿಸಿದ್ದಾರೆ.